ಮೇ.20 ರಂದು ನಿಯೋಜಿತ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

Suddivijaya
Suddivijaya May 18, 2023
Updated 2023/05/18 at 12:14 PM

ಸುದ್ದಿವಿಜಯ, ಬೆಂಗಳೂರು: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಗೆ ಫೋನ್‍ನಲ್ಲಿ ಸಂಪರ್ಕಿಸಿ ಮಾತನಾಡಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಮುಖ್ಯಮಂತ್ರಿಯಾಗಿ ಘೋಷಣೆಯಾದ ಬಳಿಕ ಸಿದ್ದರಾಮಯ್ಯ ಅವರು, ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರನ್ನು ಫೋನ್ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ರಾಜ್ಯಪಾಲರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಸಿದ್ದರಾಮಯ್ಯ ಅವರು, ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಮೇ.20 ರಂದು ಮಧ್ಯಾಹ್ನ 12.30 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇಂದು ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ ಸರಕಾರ ರಚನೆಗೆ ಹಕ್ಕುಮಂಡಿಸುವರು ಎಂದು ಮೂಲಗಳಿಂದ ತಿಳಿದು ಬಂದಿದೆ.

Share this Article
Leave a comment

Leave a Reply

Your email address will not be published. Required fields are marked *

error: Content is protected !!