ಸುದ್ದಿವಿಜಯ, ದಾವಣಗೆರೆ: ಅಂಗನವಾಡಿಯಿಂದ ಮನೆಗೆ ಬರುತ್ತಿದ್ದಾಗ ಯಮಧೂತನ ರೀತಿಯಲ್ಲಿ ಬಂದ ಟಿಪ್ಪರ್ ಮಗುವಿನ ಮೇಲೆ ಹರಿದ ಪರಿಣಾಮ 2 ವರ್ಷದ ಕಂದಮ್ಮ ಮೃತಪಟ್ಟ ಘಟನೆ ದಾವಣಗೆರೆ ನಗರದ ಕುಂದುವಾಡದಲ್ಲಿ ನಡೆದಿದೆ.
ಮೃತ ಮಗುವನ್ನು 2 ವರ್ಷದ ಚರಸ್ವಿ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟಿಪ್ಪರ್ ಮಗುವಿನ ಮೇಲೆ ಹರಿದಿದೆ ಎನ್ನಲಾಗಿದ್ದು, ಘಟನೆ ನಡೆಯುತ್ತಿದ್ದಂತೆ ಚಾಲಕ ಪರಾರಿಯಾಗಿದ್ದಾನೆ. ಈ ಹಿನ್ನೆಲೆ ಆಕ್ರೋಶ ಗೊಂಡ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ರಸ್ತೆ ಬಂದ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟಿಪ್ಪರ್ ಚಾಲಕನನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಟಿಪ್ಪರ್ ಚಾಲಕನ ಬಂಧನಕ್ಕೆ ಪೆÇಲೀಸರು ಬಲೆ ಬೀಸಿದ್ದಾರೆ.