ಜಗಳೂರು: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಅಪಘಾತ

Suddivijaya
Suddivijaya January 25, 2023
Updated 2023/01/25 at 12:37 PM

ಸುದ್ದಿವಿಜಯ, ಜಗಳೂರು: ಟ್ರ್ಯಾಕ್ಟರ್- ಲಾರಿ ನಡುವೆ ಅಪಘಾತ ಸಂಭವಿಸಿ 6 ಜನ ಗಂಭೀರ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.

ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದವರು ಗಾಣಗಟ್ಟೆ ಗ್ರಾಮದ ಮಾಯಮ್ಮ ದೇವರ ದರ್ಶನ ಮುಗಿಸಿ ವಾಪಾಸ್ ಹೋಗುವ ವೇಳೆ ಲಾರಿ ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿಯಾಗಿದೆ.

ಹುಲಿಕುಂಟ್ಟೆ ಗ್ರಾಮಸ್ಥರು ಸುಮಾರು 20 ಜನರು ಟ್ರ್ಯಕ್ಟರ್ ನಲ್ಲಿದ್ದು ಇದ್ದರಲ್ಲಿದ್ದ 4 ಜನರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜಗಳೂರು ಸರ್ವಜನಿಕ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ಜಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಘಟನೆ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share this Article
Leave a comment

Leave a Reply

Your email address will not be published. Required fields are marked *

error: Content is protected !!