ಭೀಕರ ಅಪಘಾತ ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಸಾವು!

Suddivijaya
Suddivijaya May 22, 2023
Updated 2023/05/22 at 4:52 PM

ಸುದ್ದಿವಿಜಯ, ಜಗಳೂರು: ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ಆಪೇ ಆಟೋ ಹಾಗೂ ಬೈಕ್ ನಡುವೆ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಡಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಹಾಲಸ್ವಾಮಿ(51) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಹಾಲಸ್ವಾಮಿ ಡಿಡಿಸಿಸಿ‌ ಬ್ಯಾಂಕ್ ನೌಕರನಾಗಿದ್ದು ಉತ್ತಮ ಸೇವೆ ಮಾಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದರು.

ಕೆಲಸ‌ ಮುಗಿಸಿಕೊಂಡು ರಾತ್ರಿ ಜಗಳೂರಿನಿಂದ ಹಿರೇಮಲ್ಲನಹೊಳಗೆ ಹೊರಟ್ಟಿದ್ದಾಗ ಉದ್ದಗಟ್ಟ ಕ್ರಾಸ್ ಬಳಿ‌ ಆಪೇ ಆಟೋ ನಡುವೆ ಭೀಕರ ಅಪಘಾತದಲ್ಲಿ ತಲೆ ಭಾಗ ಸೀಳಿ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತದೇಹವನ್ನು ಪಟ್ಟಣದ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿರಸಲಾಗಿದೆ. ಸ್ಥಳಕ್ಕೆ ತಹಶಿಲ್ದಾರ್ ಜಿ.ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ ಭೇಟಿ ನೀಡಿ ಸಂಬಂಧಿಕರಿಗೆ, ಕುಟುಂಬದವರಿಗೆ ಧೈರ್ಯ ತುಂಬಿದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!