ಸುದ್ದಿವಿಜಯ, ಜಗಳೂರು: ಬೂತ್ ಮಟ್ಟದ ಸಮಿತಿ ಬಿಜೆಪಿ ಡಬಲ್ ಇಂಜಿನ್ ಸರಕಾರದ ಜನಪರ ಅಭಿವೃದ್ದಿ ಯೋಜನೆಗಳನ್ನು ಮತದಾರರಿಗೆ ಜಾಗೃತಿ ಮೂಡಿಸಿ ಅಭಿಯಾನ ಯಶಸ್ವಿಗೊಳಿಸಿ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು.
ತಾಲೂಕಿನ ಕೆಚ್ಚೇನಹಳ್ಳಿ, ಹೊಸಕೆರೆ ಗ್ರಾಮಗಳಲ್ಲಿ ಜನವರಿ 3 ರಿಂದ 12 ರವರೆಗೆ ನಡೆಯಲಿರುವ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಿಜೆಪಿ ಸರಕಾರ ದೇಶದ ಭದ್ರತೆ ಸ್ವಚ್ಛತೆ, ಅಭಿವೃದ್ಧಿಗಾಗಿ ಸಂಕಲ್ಪ ಮಾಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ. ಪಕ್ಷ ಸಂಘಟಿಸಿ ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು ಎಂದರು.
![ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮದಲ್ಲಿ ಬೂತ್ ವಿಜಯ್ ಅಭಿಯಾನಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಎಸ್.ವಿ.ರಾಮಚಂದ್ರ ಚಾಲನೆ ನೀಡಿದರು.](http://suddivijaya.com/wp-content/uploads/2023/01/bjp-bhoot-2.jpg)
ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ, ವಿಧಾನ ಸಭಾ ಕ್ಷೇತ್ರಕ್ಕೆ ಕೊಡುಗೆ ನೀಡಿದ ಬಿಜೆಪಿ ಆಡಳಿತ ಪಕ್ಷದ ನೀರಾವರಿ ಯೋಜನೆಗಳನ್ನು, ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಬೂತ್ ಮಟ್ಟದಿಂದ ಕಾರ್ಯಕರ್ತರು ಮನವರಿಕೆ ಮಾಡಬೇಕಿದೆ. ಮತ್ತೊಮ್ಮೆ ಜನ ಆಶೀರ್ವಾದಿಸಬೇಕು ಎಂದರು.
ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್,ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಶಾಲಾಕ್ಷಿ, ಎಸ್.ಕೆ.ಮಂಜುನಾಥ್, ಸಿದ್ದೇಶ್, ದೀಪಕ್ ಪಟೇಲ್, ಚಂದ್ರಪ್ಪ, ಸಿದ್ದೇಶ್, ನಾರಾಯಣಸ್ವಾಮಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.