ಜಗಳೂರು: ಕಾಂಗ್ರೆಸ್ ಪ್ರತಿಭಟನೆ ಚುನಾವಣಾ ಗಿಮಿಕ್ ಪಾಲಿಟಿಕ್ಸ್ :ಎಚ್.ಸಿ.ಮಹೇಶ್

Suddivijaya
Suddivijaya March 4, 2023
Updated 2023/03/04 at 11:37 AM

ಸುದ್ದಿವಿಜಯ, ಜಗಳೂರು: ಕಾಂಗ್ರೆಸ್ ಮುಖಂಡರು ಸಿಲಿಂಡರ್ ಮತ್ತು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ವಿರುದ್ಧ ಪ್ರತಿಭಟನೆ ಕೇವಲ ಚುನಾವಣೆ ಗಿಮಿಕ್ ಆಗಿದೆ. ಲೋಕಾಯುಕ್ತ ಸಂಸ್ಥೆ ಸ್ವತಂತ್ರ ಸಂಸ್ಥೆಯಾಗಿದ್ದು ಅದರ ಕಾರ್ಯ ಅದು ಮಾಡುತ್ತಿದೆ ಎಂದು ಮಂಡಲ್ ಬಿಜೆಪಿ ಅಧ್ಯಕ್ಷ ಎಚ್.ಸಿ.ಮಹೇಶ್ ಹೇಳಿದರು.

ಪಟ್ಟಣದಲ್ಲಿ ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ನಮ್ಮ ಸರಕಾರ ಯಾರನ್ನು ರಕ್ಷಿಸುವ ಪ್ರಮಯವೇ ಇಲ್ಲ. ನಾವು ಯಾರನ್ನು ರಕ್ಷಿಸುವುದಿಲ್ಲ. ತಪ್ಪು ಮಾಡಿದವರು ಯಾರೇ ಆಗಿರಲಿ ಅವರಿಗೆ ಕಾನೂನು ಮೂಲಕ ಶಿಕ್ಷೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಎಸಿಬಿ ರಚಿಸಿದ ಸಿದ್ದರಾಮಯ್ಯ ಅವರ ಸರಕಾರ ಭ್ರಷ್ಟರನ್ನು ರಕ್ಷಿಸುವ ಕೆಲಸ ಮಾಡಿದ್ದು ಕಾಂಗ್ರೆಸ್ ಪಕ್ಷದ ಮುಖಂಡರಿಗೆ ನೆನಪಿಲ್ಲವೇ. ಲೋಕಾಯುಕ್ತ ಸಂಸ್ಥೆಯನ್ನು ಬಲ ಪಡಿಸಿದ್ದು ನಮ್ಮ ಸರಕಾರ. ಇದನ್ನು ಕಾಂಗ್ರೆಸ್ ಮುಖಂಡರು ಅರ್ಥಮಾಡಿಕೊಳ್ಳಲಿ. ಚುನಾವಣೆ ಸಮಯದಲ್ಲಿ ಪ್ರತಿಭಟನೆ ಮಾಡಿ ಜನರನ್ನು ದಿಕ್ಕು ತಪ್ಪಿಸುವುದು ಕಾಂಗ್ರೆಸ್ ಮುಖಂಡರ ಕಾರ್ಯವಾಗಿದೆ ಎಂದು ಟೀಕಿಸಿದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!