ಇಂದು ಪ್ರತಿಭಾವಂತ ಆದಿಜಾಂಬವ ಮಾದಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ!

Suddivijaya
Suddivijaya July 16, 2022
Updated 2022/07/16 at 12:09 AM

ಸುದ್ದಿವಿಜಯ: ಜಗಳೂರು: ತಾಲೂಕೂ ಆದಿಜಾಂಬವ ಮಾದಿಗ ಸಮಾಜದ ವತಿಯಿಂದ ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಹಿರಿಯೂರು ಆದಿ ಜಾಂಬವ ಸಂಸ್ಥಾನ ಮಠದ ಷಡಕ್ಷರಿ ಮುನಿ ಸ್ವಾಮೀಜಿಗಳು ಮತ್ತು ಶಾಸಕ ಎಸ್.ವಿ ರಾಮಚಂದ್ರ ಸೇರಿದಂತೆ ತಾಲೂಕಿನ ಎಲ್ಲಾ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮುಖಂಡ ಪೂಜಾರ್ ಸಿದ್ದಪ್ಪ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2021-22 ನೇ ಸಾಲಿನಲ್ಲಿ ನಮ್ಮ ಸಮುದಾಯದ ಪ್ರತಿಭಾವಂತ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶನಿವಾರ ಬೆಳಿಗ್ಗೆ 11ಕ್ಕೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಸನ್ಮಾನಿಸಲಾಗುವುದು ಎಂದರು.

ನಂತರ ದಲಿತ ಮುಖಂಡರಾದ ಜಿ.ಎಚ್. ಶಂಭುಲಿಂಗಪ್ಪ ಮಾತನಾಡಿ, ಜಗಳೂರು ತಾಲೂಕಿನ ಎಲ್ಲಾ ಸಮಾಜದ ಮುಖಂಡರು ಗ್ರಾಮ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಈ ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಆದಿಜಾಂಬವ ವಿದ್ಯಾರ್ಥಿನಿಲಯದ ಅಧ್ಯಕ್ಷರಾದ ತಿಪ್ಪೇಸ್ವಾಮಿ ಹನುಮಂತಪುರ, ಕಾರ್ಯದರ್ಶಿ ರಾಜನಹಟ್ಟಿ ಚಂದ್ರಪ್ಪ, ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವೈ.ರಾಜಶೇಖರ್, ಸೂರಗೊಂಡನಹಳ್ಳಿ ಕುಬೇಂದ್ರಪ್ಪ, ಸಂಚಾಲಕರಾದ ಮಲ್ಲೇಶ್ ಪೂಜಾರ್ ಉಪಸ್ಥಿತರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!