ಸುದ್ದಿವಿಜಯ, ಜಗಳೂರು: ಸರ್ವ ವ್ಯಾಪ್ತಿ ಸರ್ವ ಸ್ಪರ್ಸಿ ಬಿಜೆಪಿ ಸರಕಾರ ಮುಂಬರುವ 2023ರ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿ ಮುಖಂಡ ಆರುಂಡಿ ನಾಗರಾಜ್ ಹೇಳಿದರು.
ಜಗಳೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಮಾ. 13 ನಡೆಯಲಿರುವ ಜಿಲ್ಲಾ ಮಟ್ಟದ ಎಸ್ಸಿ ಮೋರ್ಚಾ ಸಮಾವೇಶದ ಅಂಗವಾಗಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,
ಡಬಲ್ ಎಂಜಿನ್ ಸರಕಾರ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಸದುದ್ದೇಶದಿಂದ ಆಡಳಿತ ನಡೆಸುತ್ತಿದ್ದು, ರೈತರಿಗೆ ಕೃಷಿ ಕಾರ್ಮಿಕರಿಗೆ ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಪೆÇ್ರೀತ್ಸಾಹದ ಜೊತೆಗೆ ಆಂತರಿಕ ಸಮಸ್ಯೆಗಳನ್ನು ತರಿ ಸರಿದೂಗಿಸುತ್ತಾ ಬಾಹ್ಯ ಸ್ಪರ್ಧೆಗಳನ್ನು ಸಮರ್ಥವಾಗಿ ಎದುರಿಸುತ್ತಿದೆ.
![ಜಗಳೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮುಖಂಡ ಆರುಂಡಿ ನಾಗರಾಜ್ ಮಾತನಾಡಿದರು.](http://suddivijaya.com/wp-content/uploads/2023/03/254c33a6-f078-411a-b200-c491daae6375.jpg)
ಭಾರತವು ಅತ್ಯಂತ ಬಲಿಷ್ಠ ರಾಷ್ಟ್ರ ಎಂಬುವುದರ ಜೊತೆಗೆ ವಿಶ್ವಕ್ಕೆ ಮಾರ್ಗದರ್ಶನ ಮಾಡುವ ಮಟ್ಟಕ್ಕೆ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿಗೆ ಸಾಬೀತುಪಡಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರು, ಮಂಡಲ ಅಧ್ಯಕ್ಷರಾದ ಮಹೇಶ್, ಓಬಿಸಿ ಮೋರ್ಚಾ ಅಧ್ಯಕ್ಷರಾದ ಬಸವರಾಜ್, ಮಂಡಲ ಪದಾಧಿಕಾರಿಗಳು ಮೋರ್ಚಾ ಗಳ ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರದ ಪದಾಧಿಕಾರಿ ಗಳನ್ನು ಒಳಗೊಂಡಂತೆ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.