ಅಪರಿಚಿತ ಕಾರು ಡಿಕ್ಕಿ ಕೆಳಗೋಟೆ ಗ್ರಾಮದ ಯುವಕ ಸ್ಥಳದಲ್ಲೇ ಸಾವು!

Suddivijaya
Suddivijaya June 22, 2023
Updated 2023/06/22 at 4:11 PM

ಸುದ್ದಿವಿಜಯ, ಜಗಳೂರು: ತಾಲೂಕಿನ ಕೊಟ್ಟೂರು ರಸ್ತೆಯಲ್ಲಿ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಅಪರಿಚಿತ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದ ಮಂಜು ಅವರ ಪುತ್ರ ಬೈಕ್ ಸವಾರ ಅಜಯ್ (25) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತನ್ನ ಸಹೋದರನ್ನು ಕರೆದುಕೊಂಡು ಬರಲು ಬೈಕ್‍ನಲ್ಲಿ ಕೆಳಗೋಟೆಯಿಂದ ಜಗಳೂರು ಪಟ್ಟಣಕ್ಕೆ ಬರುತ್ತಿರುವಾಗ ಪಪಂ ಸದಸ್ಯ ರಮೇಶ್‍ರೆಡ್ಡಿ ಅವರ ಹೊಲದ ಬಳಿ ಅಪರಿಚಿತ ಕಾರೊಂದು ಬೈಕ್‍ಗೆ ಡಿಕ್ಕಿಯಾಗಿದ್ದರಿಂದ ಯುವಕನ ತಲೆಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪರಿಚಿತ ಕಾರು ಯಾರೆಂದೆಂದು ತಿಳಿದು ಬಂದಿಲ್ಲ.

ಸ್ಥಳಕ್ಕೆ ಜಗಳೂರು ಪಟ್ಟಣದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಪಘಾತದಿಂದ ಸಾವನ್ನಪ್ಪಿದ ಯುವಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

 

Share this Article
Leave a comment

Leave a Reply

Your email address will not be published. Required fields are marked *

error: Content is protected !!