ದೇವಸ್ಥಾನಕ್ಕೆ ಹೋಗಿ ಬರುವಾಗ ಕಾರು,ಬಸ್ ನಡುವೆ ಅಪಘಾತ ಓರ್ವ ಸಾವು,ಮೂವರ ಸ್ಥಿತಿ ಗಂಭೀರ!

Suddivijaya
Suddivijaya May 3, 2023
Updated 2023/05/03 at 1:57 PM

ಸುದ್ದಿವಿಜಯ, ಜಗಳೂರು: ತಾಲೂಕಿನ ಬಿಳಿಚೋಡು ಹೋಬಳಿಯ ನರೇನಹಳ್ಳಿ ಬಳಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಖಾಸಗಿ ಬಸ್ ಮತ್ತು ಕಾರು ಮಧ್ಯೆ ನಡೆದ ಅಪಘಾತದಲ್ಲಿ ವೆಂಕಟಸ್ವಾಮಿಶೆಟ್ಟಿ ಎಂಬುವರ ಪುತ್ರ ಅರುಣಾಚಲ ಶೆಟ್ಟಿ(55) ಎಂಬುವರು ಮೃತಪಟ್ಟಿದ್ದು ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಬಿಳಿಚೋಡು ಪೊಲೀಸರು ಮಾಹಿತಿ ನೀಡಿದ್ದಾರೆ.

ದಾವಣಗೆರೆ ಮೂಲದ ಅರುಣಾಚಲಶೆಟ್ಟಿ ಮತ್ತು ಕುಟುಂದವರು ಉಜ್ಜಿನಿಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಾಸ್ ಬರುವಾಗ ದಾವಣಗೆರೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಅರುಣಾಚಲಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉಳಿದ ಮೂರು ಜನರಿಗೆ ಗಾಯಗಳಾಗಿವೆ. ಅವರನ್ನು ದಾವಣಗೆರೆ ಮತ್ತು ಜಗಳೂರು ಪಟ್ಟಣದ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್‍ನಲ್ಲಿದ್ದ ಒಬ್ಬ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಳಿಚೋಡು ಸಿಪಿಐ ಸೋಮಶೇಖರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡಿದ್ದಾರೆ.

 

Share this Article
Leave a comment

Leave a Reply

Your email address will not be published. Required fields are marked *

error: Content is protected !!