ಜಗಳೂರು ಪಟ್ಟಣದಲ್ಲಿ ಭೀಕರ ಅಪಘಾತ ಇಬ್ಬರು ಸಾವು!

Suddivijaya
Suddivijaya August 14, 2024
Updated 2024/08/14 at 11:55 AM

suddivijayanews14/08/2024

ಸುದ್ದಿವಿಜಯ, ಜಗಳೂರು: ಪಟ್ಟಣದ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ಎನ್‍ಎಂಸಿ ಹೋಟೆಲ್ ಬಳಿ ಖಾಸಗಿ ಬಸ್ ಮುಂದೆ ಚಲಿಸುತ್ತಿದ್ದ ಬೈಕ್‍ಗೆ ಗುದ್ದಿದ ಪರಿಣಾಮ ಇಬ್ಬರು ದ್ವಿಚಕ್ರವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಜಗಳೂರು ತಾಲೂಕಿನ ತಮಲೇಹಳ್ಳಿ ಗ್ರಾಮದ ರಾಜು(42), ಒಬಳೇಶ್(60) ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ದಾವಣಗೆರೆಗೆ ಹೊರಟಿದ್ದ SRE  ಖಾಸಗಿ ಬಸ್ ಪಟ್ಟಣದ ಹೃದಯ ಭಾಗದಲ್ಲಿ ಪ್ರವೇಶಿಸುತ್ತಿದ್ದಂತೆ ಜನನಿಬಿಡ ಪ್ರದೇಶದಲ್ಲಿ ಬೈಕ್ ಸವಾರರು ನಿಧಾನವಾಗಿ ಬೈಕ್ ಚಲಾಯಿಸುತ್ತಿದ್ದರು.ಬಸ್ ಚಾಲಕ ವೇಗವಾಗಿ ಬಂದ ಪರಿಣಾಮ ಮುಂದೆ ಸಾಗುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಸವಾರರಿಬ್ಬರು ಬಸ್‍ನ ಚಕ್ರಕ್ಕೆ ಸಿಲುಕಿದ್ದಾರೆ. ಬಸ್ ನ ಟೈಯರ್ ಇಬ್ಬರು ವ್ಯಕ್ತಿಗಳ ಮೇಲೆ ಹರಿದಿದೆ.ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಅಸುನೀಗಿದ್ದಾನೆ  ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶಾಸಕ ಬಿ.ದೇವೇಂದ್ರಪ್ಪ ಮತ್ತು ಠಾಣೆಯ ಇನ್‍ಸ್ಪೆಕ್ಟರ್ ಡಿ.ಶ್ರೀನಿವಾಸ್‍ರಾವ್  ಭೇಟಿ ನೀಡಿ ಪರಿಶೀಲಿಸಿದರು.

ಬಸ್ ಚಾಲಕನ ಮೇಲೆ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸ್ಪತ್ರೆಯ ಶವಾಗಾರದಲ್ಲಿ ಮೃತ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

Share this Article
Leave a comment

Leave a Reply

Your email address will not be published. Required fields are marked *

error: Content is protected !!