ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳುಗಾರ: ಸಿದ್ದರಾಮಯ್ಯ ವಾಗ್ದಾಳಿ

Suddivijaya
Suddivijaya April 30, 2023
Updated 2023/04/30 at 12:50 PM

ಸುದ್ದಿವಿಜಯ,ಜಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಂತಹ ಸುಳ್ಳುಗಾರ ಮತ್ತೊಬ್ಬರಿಲ್ಲ. ಪ್ರತಿ ವ್ಯಕ್ತಿಗೆ ಕಪ್ಪುಹಣ ತಂದು 15 ಲಕ್ಷ ರೂ ಅಕೌಂಟ್‍ಗಳಿಗೆ ಹಾಕುತ್ತೇನೆ ಎಂದರು. ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದರು. ಇಲ್ಲಿಯವರೆಗೆ 15 ಪೈಸೆಯನ್ನು ಹಾಕಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಪಟ್ಟಣದ ಬಯಲು ರಂಗಮಂದಿರದಲ್ಲಿ ಮಾತನಾಡಿದ ಅವರು, ನಾ ಕಾವುಂಗ ನಾ ಕಾನೇದೊಂಗಾ ಎಂದು ಹೇಳುತ್ತಾರೆ. ಆದರೆ ನಿಮ್ಮ ಪಕ್ಷದ ಸಿಎಂ ಬಸವರಾಜ್ ಬೊಮ್ಮಾಯಿ ಮಾಡಿದ್ದು ಏನು? 40 ಪರ್ಸೆಂಟ್ ಭ್ರಷ್ಟಾಚಾರ, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಅಲ್ಲವೇ ಇದಕ್ಕೇನು ಹೇಳುತ್ತೀರಿ ಮೋದಿ ಅವರೇ? ಹಾಗಾದರೆ ನಿಮ್ಮ ಪಕ್ಷದಲ್ಲಿರುವ ಭ್ರಷ್ಟಾಚಾರವನ್ನು ಹೇಗೆ ನಿಯಂತ್ರಿಸುವಿರಿ ಎಂದು ಪ್ರಶ್ನಿಸಿದರು. ಬಿಜೆಪಿಯವರು ಅಲಿಬಾಬು ಮತ್ತು 40 ಕಳ್ಳರ ಕಥೆಯ ಗುಂಪಿನಂತೆ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಪ್ರಣಾಳಿಕೆಗಳಲ್ಲಿ ಇದ್ದ 165 ಯೋಜನೆಗಳಲ್ಲಿ 163 ಯೋಜನೆಗಳನ್ನು ಜಾರಿಗೆ ತಂದೆ. ಈ ಬಾರಿ ಐದು ಗ್ಯಾರಂಟಿ ಯೋಜನೆಗಳಿಗೆ ಡಿ.ಕೆ.ಶಿವಕುಮಾರ್ ಮತ್ತು ನಾನು ಸಹಿ ಮಾಡಿರುವ ಗ್ಯಾರಂಟಿ ಕಾರ್ಡ್ ವಿತರಿಸಿದ್ದೇವೆ.

ಪ್ರತಿ ಕುಟುಂಬಕ್ಕೆ 200 ಯುನಿಟ್ ವಿದ್ಯುತ್, 10 ಕೆಜಿ ಅಕ್ಕಿ, ಕುಟುಂಬದ ಯಜಮಾನಿಗೆ ತಿಂಗಳಿಗೆ 2000 ರೂ, ನಿರುದ್ಯೋಗಿ ಯುವಕರಿಗೆ ಮೂರು ಸಾವಿರ ಮತ್ತು ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡುವ ಯೋಜನೆ ಜಾರಿಗೆ ತಂದಿದ್ದೇವೆ. ನೀವು ವೋಟ್ ಹಾಕುವುದು ನನಗೆ ಎಂದು ಭಾವಿಸಿ ಈ ಬಾರಿ ದೇವೇಂದ್ರಪ್ಪ ಅವರಿಗೆ ಮತ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!