ಜಗಳೂರು: ಕಳುವಾದ ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Suddivijaya
Suddivijaya August 8, 2024
Updated 2024/08/08 at 11:59 AM

suddivijayanews8/08/2024

ಸುದ್ದಿವಿಜಯ, ಜಗಳೂರು: ಪಟ್ಟಣದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮೊಬೈಲ್‍ಗಳನ್ನು ಸಿಇಐಆರ್ ವೆಬ್ ಪೋರ್ಟಲ್‍ನಲ್ಲಿ ನೋಂದಾಯಿಸಿ ಬ್ಲಾಕ್ ಮಾಡಿ ನಂತರ ಪತ್ತೆ ಹಚ್ಚಲಾಗಿದ್ದ ವಿವಿಧ ಕಂಪನಿಗಳ ಅಂದಾಜು 1.37 ಲಕ್ಷ ರೂ ಮೌಲ್ಯದ 9 ಮೊಬೈಲ್‍ಗಳನ್ನು ವಾರಸುದಾರರಿಗೆ ಬುಧವಾರ ಪೊಲೀಸ್ ಠಾಣೆಯಲ್ಲಿ ಹಸ್ತಾತರಿಸಲಾಯಿತು.

ದಾವಣಗೆರೆ ಗ್ರಾಮಾಂತರ ಡಿವೈಎಸ್‍ಪಿ ಬಿ.ಎಸ್.ಬಸವರಾಜ್ ಮತ್ತು ಇನ್‍ಸ್ಪೆಕ್ಟರ್ ಡಿ.ಶ್ರೀನಿವಾಸ್ ರಾವ್ ಸಮ್ಮುಖದಲ್ಲಿ ವಾರಸುದಾರರು ತಮಗೆ ಸಂಬಂಧಿಸಿದ ಮೊಬೈಲ್‍ಗಳನ್ನು ಪಡೆದುಕೊಂಡರು.

ನಂತರ ಮಾತನಾಡಿದ ಡಿವೈಎಸ್‍ಪಿ ಬಿ.ಎಸ್.ಬಸವರಾಜ್, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಮೊಬೈಲ್ ಕಳೆದುಕೊಂಡವರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಸಿಇಐಆರ್ ಪೋರ್ಟಲ್ ಮೂಲಕ ಮೊಬೈಲ್ ಪತ್ತೆಗೆ ತಂತ್ರಾಂಶ ಬಳಸಿ ಸುಲಭವಾಗಿ ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ ಎಂದರು.

ಈ ವೇಳೆ ಇನ್‍ಸ್ಪೆಕ್ಟರ್ ಎಂ.ಶ್ರೀನಿವಾಸ್‍ರಾವ್, ಪಿಎಸ್‍ಐ ಎಸ್.ಡಿ.ಸಾಗರ್ ಮತ್ತು ಸಿಬ್ಬಂದಿ ಇದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!