ಜಗಳೂರು: ಮಾಜಿ ಸಚಿವ ಎಚ್.ಆಂಜನೇಯಗೆ ಪರಿಷತ್ ಟಿಕೆಟ್ ಕೊಡಿ

Suddivijaya
Suddivijaya May 23, 2024
Updated 2024/05/23 at 11:20 AM

ಸುದ್ದಿವಿಜಯ, ಜಗಳೂರು: ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ ಟಿಕೇಟ್ ನೀಡಿ ಗೆಲ್ಲಿಸಬೇಕು ಎಂದು ತಾಲೂಕು ಮಾದಿಗ ಸಮಾಜ ಒತ್ತಾಯಿಸಿದೆ.

ಜಗಳೂರು ಪಟ್ಟಣದ ಆದಿಜಾಂಬ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಸಮಾಜದ ಹಿರಿಯ ಮುಖಂಡ ಎಚ್. ಶಂಭುಲಿಂಗಪ್ಪ ಮಾತನಾಡಿ, ಸಿ.ಎಂ, ಡಿಸಿಎಂ ಇಬ್ಬರು ವಿಧಾನ ಪರಿಷತ್ ನಲ್ಲಿ ಖಾಲಿ ಇರುವ 11 ಸ್ಥಾನಗಳಲ್ಲಿ ಆಂಜನೇಯ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಮಾದಿಗ ಸಮಾಜ ದೊಡ್ಡ ಸಂಖ್ಯೆಯಲ್ಲಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದಿದ್ದರೆ ಸಚಿವರಾಗುತ್ತಿದ್ದರು. ಆದರೆ ಮತದಾರರ ಕೈ ಹಿಡಿಯಲಿಲ್ಲ. ಆದರೂ ಸುಮ್ಮನೆ ಕೂರದೆ ಪ್ರವಾಸ ಮಾಡಿ ಪಕ್ಷ ಸಂಘಟಿಸುತ್ತಿದ್ದಾರೆ.

  ಜಗಳೂರು ಪಟ್ಟಣದಲ್ಲಿ ಮಾದಿಗ ಸಮುದಾಯದಿಂದ ಪತ್ರಿಕಾಗೋಷ್ಠಿ ನಡೆಯಿತು. ಜಗಳೂರು ಪಟ್ಟಣದಲ್ಲಿ ಮಾದಿಗ ಸಮುದಾಯದಿಂದ ಪತ್ರಿಕಾಗೋಷ್ಠಿ ನಡೆಯಿತು.

ಲೋಕಸಭಾ ಚುನಾವಣೆಯಲ್ಲಿ ಮಾದಿಗ ಸಮಾಜದ ಮತಗಳು ಹೆಚ್ಚು ಕಾಂಗ್ರೆಸ್ ಗೆ ಬೀಳುವಂತೆ ಮಾಡಿದ್ದಾರೆ. ಆದ್ದರಿಂದ ಸಿ.ಎಂ, ಡಿಸಿಎಂ ಮಾದಿಗ ಸಮಾಜದ ನಾಯಕನಿಗೆ ನ್ಯಾಯ ಸ್ಥಾನ ನೀಡಬೇಕು ಎಂದರು.

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಕೆಪಿಸಿಸಿ ಕಾರ್ಮಿಕ ವಿಭಾಗ ರಾಜ್ಯ ಸಂಘಟನಾ ಕಾರ್ಯದರ್ಶಿ ಗುತ್ತಿದುರ್ಗ ರುದ್ರೇಶ್, ಪ.ಪಂ ಮಾಜಿ ಅಧ್ಯಕ್ಷ ಮಂಜುನಾಥ್, ಮಾಜಿ ನಿವೃತ್ತ ನೌಕರ ಪಾಪಣ್ಣ,

ಮುಖಂಡರಾದ ಹಟ್ಟಿ ತಿಪ್ಪೇಸ್ವಾಮಿ, ಹನುಮಂತಾಪುರ ಶಿವಣ್ಣ, ಗ್ರಾ.ಪಂ ಅಧ್ಯಕ್ಷ ತಿಪ್ಪೇಸ್ವಾಮಿ, ಅಣಬೂರು ರೇಣುಕೇಶ್, ಕೆಪಿಸಿಸಿ ಎಸ್ಸಿ ಘಟಕದ ಉಪಾಧ್ಯಕ್ಷ ಸಿ.ಎಂ ಹೊಳೆ ಮಾರುತಿ, ದಸಂಸ ಸಂಚಾಲಕ ಸತೀಶ್ ಮಾಚಿಕೆರೆ ಸೇರಿದಂತೆ ಮತ್ತಿತರರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!